ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…