News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1408

ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ  ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.

ಕರಬೂಜ ಹಣ್ಣು ಹಾಗೂ ಬೀಜ ಇವು ಕರಬೂಜದ ಔಷಧೋಪಯೋಗಿ ಭಾಗಗಳು:-

೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.

ತೂಕ ಇಳಿಸಲು ನೆರವಾಗುತ್ತದೆ:-

ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.

ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.

ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.