inspirational

ಕರೋನಾ ವೈರಸ್ COVID – 19

14
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಜೀವನಶೈಲಿ

    ಚಾಣಕ್ಯನ ಪ್ರಕಾರ ಇಂತಹ ಸಮಯಗಳಲ್ಲಿ ಸ್ನಾನ ಮಾಡಲೆಬೇಕಂತೆ! ಏಕೆ ಗೊತ್ತಾ?ಮುಂದೆ ಓದಿ…

    ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.