inspirational

ಕರೋನಾ ವೈರಸ್ COVID – 19

28
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.