inspirational

ಕರೋನಾ ವೈರಸ್ COVID – 19

17
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ವೀಡಿಯೊ ಗ್ಯಾಲರಿ

    ನ್ಯಾಯಬೆಲೆ ಅಂಗಡಿಗಳು ಬಡವರಿಗೆ ಕೊಡುವ ಅಕ್ಕಿಯಲ್ಲಿ ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ.?ತಿಳಿಯಲು ಮುಂದೆ ನೋಡಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ