ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಕೊರೊನಾ ವೈರಸ್ ಹಬ್ಬುವುದು ಹೇಗೆ?
*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ

ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?
ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?
ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.
*ಮೂಗು ಸೋರುವುದು
*ತಲೆನೋವು
*ಕೆಮ್ಮು
*ಗಂಟು ನೋವು
*ಜ್ವರ
*ಸಂಪೂರ್ಣವಾಗಿ ಅನಾರೋಗ್ಯ
ಈ ರೋಗದ ವೈರಸ್ಗಳು ತುಂಬಾನೇ ಡೇಂಜರಸ್
ಕೆಲವು ಕೊರೊನಾ ವೈರಸ್ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.
ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.
*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.
ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?



ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.
*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.
*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.
*ಸಾಕಷ್ಟು ವಿಶ್ರಾಂತಿ ಪಡೆಯಿರಿ.
ನೀರಿನಾಂಶ ಹೆಚ್ಚು ಸೇವಿಸಿ.

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.
*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.
* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.
*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.
*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.
*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.
*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.
ವಿಳಾಸ: MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…