News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕರೋನಾ ವೈರಸ್ COVID – 19

30
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…