ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

654

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಉಪಯುಕ್ತ ಮಾಹಿತಿ

    ನಿಮ್ಮ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು..?ಯಾರೆಲ್ಲ ರಕ್ತದಾನ ಮಾಡಬಹುದು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.