ಸುದ್ದಿ

ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

65

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ,

ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ.ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ. ಆದರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಅವೈಜ್ಞಾನಿಕ ಎಂದು ಕರ್ನಾಟಕದ ಪ್ರತಿನಿಧಿಗಳು ವಾದಿಸಿದ್ದಾರೆ.ಎರಡು ರಾಜ್ಯಗಳಲ್ಲಿ ಮಳೆ ಅಭಾವ ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರುಮಳೆ ಪ್ರವೇಶ ವಿಳಂಬವಾಗಲಿದ್ದು, ಜೂನ್ 8ರ ನಂತರ ಮೊದಲ ಮಳೆ ಸಿಂಚನ ಸಾಧ್ಯತೆಯಿದೆ. ಕಳೆದ ವಾರದಿಂದ ದಕ್ಷಿಣ ಒಳನಾಡಿನಲ್ಲಿ ಸುರಿದ ಗಾಳಿ ಮಳೆಯಿಂದ ಹಾನಿ ಪ್ರಮಾಣವೇ ಅಧಿಕವಾಗಿದೆ ಎಂದು ಕರ್ನಾಟಕದ ಜಲ ಸಂಪನ್ಮೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ವಾದಿಸಿದ್ದಾರೆ.

ನಮಗೆ ಕುಡಿಯುವ ನೀರಿಲ್ಲ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 81.37 ಅಡಿಗಳಷ್ಟು ನೀರಿದೆ. ಒಟ್ಟಾರೆ 11 ಟಿಎಂಸಿಯಷ್ಟು ನೀರು ಹೊಂದಿದ್ದು, ನಮಗೆ ಕುಡಿಯಲು ನೀರಿಲ್ಲ, ಮಳೆ ಶುರುವಾಗಿ, ನೀರು ಬಂದರೆ ಮಾತ್ರ ಆದೇಶ ಪಾಲಿಸಲು ಸಾಧ್ಯ, ಈ ಬಗ್ಗೆ ನೂತನ ಸಂಸದೆ ಸುಮಲತಾ ಅಂಬರೀಷ್ ಅವರು ಮೋದಿ ಅವರ ಜೊತೆ ಮಾತನಾಡಬೇಕಿದೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದಾರೆ.ಆದೇಶದಲ್ಲಿ ಏನಿದೆ ಷರತ್ತು? ಕಾವೇರಿ ಪ್ರಾಧಿಕಾರದ ಇಂದಿನ ಸಭೆಯಲ್ಲಿ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ಜಲಾಶಯಕ್ಕೆ ಒಳ ಹರಿವು ಅಧಿಕವಾದರೆ ತಮಿಳುನಾಡಿಗೆ ನಿಗದಿಯಂತೆ ನೀರು ಹರಿಸಬೇಕು ಎಂದು ಹೇಳಲಾಗಿದೆ. ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲಒಳ ಹರಿವು ಬರದೇ ಇದ್ದಲ್ಲಿ ಏನು ಗತಿ? ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ. ಆದರೆ, ಈಗ ಲಭ್ಯ ನೀರಿನ ಪ್ರಮಾಣದಿಂದ ಕುಡಿಯುವ ನೀರಿನ ಪೂರೈಕೆ ಕಷ್ಟವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

    ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…