ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!
ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.
ಕರ್ನಾಟಕದ ಮೊದಲ ಖಾಸಗಿ ಚಾನೆಲ್…
ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.
ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.
ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.
ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…
ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”
ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-
ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.
ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.
“ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.
ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.
ಮುಂದೆ ಏನಾಗಬಹುದು…
2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.
ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.
ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.
ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?
ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…