karnataka

ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

1316

ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!

ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.

ಕರ್ನಾಟಕದ ಮೊದಲ ಖಾಸಗಿ ಚಾನೆಲ್…

ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.

ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.

ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.

ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…

ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”

ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-

ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.

ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.

 “ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.

ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.

ಮುಂದೆ ಏನಾಗಬಹುದು…

2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.

ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.

ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.

ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?

ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…