ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!
ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.
ಕರ್ನಾಟಕದ ಮೊದಲ ಖಾಸಗಿ ಚಾನೆಲ್…
ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.
ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.
ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.
ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…
ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”
ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-
ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.
ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.
“ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.
ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.
ಮುಂದೆ ಏನಾಗಬಹುದು…
2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.
ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.
ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.
ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?
ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…