karnataka

ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

1317

ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!

ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.

ಕರ್ನಾಟಕದ ಮೊದಲ ಖಾಸಗಿ ಚಾನೆಲ್…

ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.

ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.

ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.

ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…

ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”

ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-

ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.

ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.

 “ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.

ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.

ಮುಂದೆ ಏನಾಗಬಹುದು…

2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.

ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.

ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.

ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?

ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.