ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

ಈ ಒಪ್ಪಂದದ ಪ್ರಕಾರ, ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಹೊಸೂರುಗಳಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೋಧನೆ ಮಾಡುವುದಲ್ಲದೇ, ಆರ್ಥಿಕವಾಗಿಯೂ ಇದು ಪ್ರಯೋಜನಕ್ಕೆ ತರುತ್ತದೆಯೇ ಎಂಬ ಬಗ್ಗೆಯೂ ಅಧ್ಯಯನ ನಡೆಸಲಿದೆ.
ಒಂದೊಮ್ಮೆ ಈ ಯೋಜನೆ ಜಾರಿಯಾಗಲು ಅರ್ಹವೆಂದು ಕಂಡುಬಂದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವೇಗ ಕೇವಲ ಅರ್ಧಗಂಟೆಗೆ ಇಳಿಯಲಿದೆ. ಅಂದರೆ, ವಿಮಾನ ಪ್ರಯಾಣಕ್ಕಿಂತಲೂ ಕಡಿಮೆ ಸಮಯದಲ್ಲಿ ಈ ನಗರಗಳ ನಡುವೆ ಸಂಚಾರ ಮಾಡಬಹುದಾಗಿದೆ.

ಒಪ್ಪಂದದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “”ಬೆಂಗಳೂರು ಐಟಿ ಹಬ್ ಆಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಜಗತ್ತಿನ ಅತ್ಯಂತ ಪ್ರಮುಖ ಐಟಿ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಒಂದು ವೇಳೆ ಹೈಪರ್ಲೂಪ್ನಂಥ ನವ ತಂತ್ರಜ್ಞಾನವನ್ನು ರಾಜ್ಯದಲ್ಲಿ ಅಳವಡಿಸಿದ್ದೇ ಆದರೆ, ಕರ್ನಾಟಕದ ಪ್ರಗತಿಯ ವೇಗ ಮತ್ತಷ್ಟು ಹೆಚ್ಚುತ್ತದೆ,” ಎಂದಿದ್ದಾರೆ.

ಹೈಪರ್ಲೂಪ್ ಯೋಜನೆಗಾಗಿ ಕೇವಲ ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳೂ ವರ್ಜಿನ್ ಹೈಪರ್ಲೂಪ್ ಒನ್ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿವೆ. ಈ ಕಂಪನಿ ಪ್ರಾಥಮಿಕವಾಗಿ ಸ್ಥಳ ಮತ್ತು ಯೋಜನೆಯ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲಿದೆ.
ಏನಿದು ಹೈಪರ್ಲೂಪ್?
ವಿಶೇಷವಾಗಿ ನಿರ್ಮಿಸಲಾದ ಕೊಳವೆಯೊಂದರಲ್ಲಿ ಪಾಡ್(ಪುಟ್ಟ ವಾಹನಗಳು)ಗಳು ಸಾಗುವಂತೆ ಮಾಡುವುದು. ಈ ಕೊಳವೆಯನ್ನು ನೆಲದಿಂದ ಕೊಂಚ ಮೇಲೆಯೇ ನಿರ್ಮಿಸಲಾಗಿರುತ್ತದೆ. ಅಯಸ್ಕಾಂತೀಯ ಗುಣದೊಂದಿಗೆ ಈ ಕೊಳವೆಯ ಯಾವುದೇ ಬದಿಗೂ ಪಾಡ್ ತಗುಲದಂತೆ ಮಾಡಲಾಗುತ್ತದೆ.

ಇನ್ನೂ ವಿಶೇಷವೆಂದರೆ, ಈ ಕೊಳವೆಗೆ ಹೊರಗಿನಿಂದ ಗಾಳಿ ಹೋಗದಂತೆ ನಿರ್ಮಿಸಲಾಗುತ್ತದೆ. ಅಲ್ಲದೆ, ಇದೇ ಕಾಂತೀಯ ಶಕ್ತಿಯಿಂದಲೇ ಇದನ್ನು ಚಲಿಸುವಂತೆ ಮಾಡಲಾಗುತ್ತದೆ. ಆರಂಭದಲ್ಲಿ ಗಂಟೆಗೆ 640 ಕಿ.ಮೀ. ವೇಗ ಎಂದು ಹೇಳಲಾಗಿತ್ತಾದರೂ, ಇದೀಗ ಪ್ರಯೋಗ ಯಶಸ್ವಿಯಾದ ಬಳಿಕ ಗಂಟೆಗೆ ಒಂದು ಸಾವಿರ ಕಿ.ಮೀ. ವೇಗವಾಗಿ ಹೋಗಬಹುದು ಎಂದು ಹೇಳಲಾಗುತ್ತಿದೆ.
ಎಲ್ಲೆಲ್ಲಿ ಯೋಜನೆ?

ಅಮೆರಿಕ, ಬ್ರಿಟನ್, ಕೆನಡಾ, ಯುಎಇ, ಫಿನ್ಲಂಡ್ ಮತ್ತು ಭಾರತ. ಭಾರತದಲ್ಲಿ ಬೆಂಗಳೂರು, ತುಮಕೂರು, ಹೊಸೂರು, ಹುಬ್ಬಳ್ಳಿ, ಮುಂಬೈ, ಪುಣೆ ನಗರಗಳಲ್ಲಿ ಯೋಜನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…