News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

807

ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಡಿ.19 ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ನಮ್ಮ ಕಾಂಗ್ರೆಸ್ ಐತಿಹಾಸಿಕ ಸಮಾವೇಶಕ್ಕೆ ಪೂರ್ವಭಾವಿ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ತಮ್ಮ ಅಭಿಮಾನಿ ಬೆಂಬಲಿಗರು ಸ್ವಯಂ ಪ್ರೇರಣೆಯಿಂದ ಕಾರುಗಳನ್ನು ತಂದಿದ್ದು, ಇಂದಿನಿಂದ ರಾಜ್ಯದೆಲ್ಲೆಡೆ ಈ ಕಾರುಗಳು ಪ್ರವಾಸ ನಡೆಸಿ ಕೂಡಲಸಂಗಮ ಸಮಾವೇಶಕ್ಕೆ ನಾಲ್ಕರಿಂದ ಐದು ಲಕ್ಷ ಮಂದಿಯನ್ನು ಸೇರಿಸುವ ಕೆಲಸ ಮಾಡಲಿದ್ದಾರೆಂದು ವಿವರಿಸಿದರು.

ನಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಶಕ್ತಿ ಕೊಟ್ಟಿರುವ ಉತ್ತರ ಕರ್ನಾಟಕದ ಅಭಿಮಾನಿ ಬೆಂಬಲಿಗರಿಗೆ ತಾವು ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ ಅವರು, ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರಹಸ್ಯ ಅಜೆಂಡಾ ಇಲ್ಲ, ಬಡವರು, ದೀನ ದಲಿತರು ಹಾಗೂ ಅಹಿಂದ ವರ್ಗದವರು, ಶೋಷಿತರ ಪಕ್ಷವಾಗಿದೆ. ಪಕ್ಷದ ಪ್ರಚಾರ ಕಾರ್ಯಕ್ಕೆ ತಾವು ಯಾವುದೇ ಹಣಕಾಸು ನೆರವು ನೀಡಿಲ್ಲ, ಅಭಿಮಾನಿ ಬೆಂಬಲಿಗರೇ ಸ್ವಯಂ ಪ್ರೇರಿತವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಂದು ಹೇಳಿದರು.

ನಮ್ಮ ಕಾಂಗ್ರೆಸ್ಪ ಕ್ಷವು ಒಂದು ಸಮಾಜದ ಪಕ್ಷವಲ್ಲವೆಂದು ಸ್ಪಷ್ಟಪಡಿಸಿದ ಅವರು, ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ, ಬಡವರ ಕಲ್ಯಾಣಕ್ಕಾಗಿ ಎಲ್ಲಾ ವರ್ಗದವರ ಪಕ್ಷವಾಗಿ ನಮ್ಮ ಕಾಂಗ್ರೆಸ್ಅ ನ್ನು ರೂಪಿಸಲಾಗುತ್ತಿದೆ, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ನೊಂದಿರುವ ಅನೇಕ ಮುಖಂಡರು ನಮ್ಮ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಬಹಳಷ್ಟು ಮುಖಂಡರು ಪಕ್ಷದ ಸಂಪರ್ಕದಲ್ಲಿದ್ದಾರೆಂದು ಅವರು ಮಾರ್ಮಿಕವಾಗಿ ನುಡಿದರು.

ಡಿ.19 ರ ಕೂಡಲಸಂಗಮದಲ್ಲಿ ಪಕ್ಷವನ್ನು ಅಧಿಕೃತವಾಗಿ ಉದ್ಘಾಟಿಸಿದ ನಂತರ ಕರ್ನಾಟಕದ ಯಾವ ಯಾವ ಕ್ಷೇತ್ರಗಳಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಬೇಕೆಂಬುದನ್ನು ನಿರ್ಧರಿಸಲಾಗುವುದು, ತಮ್ಮ ಬೆಂಬಲಿಗರಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತದೆಯೆಂದು ಸುಳಿವು ನೀಡಿದರು.

ಇದೇ ಸಂದರ್ಭದಲ್ಲಿ ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಕಾರುಗಳ ಪ್ರಚಾರ ಕಾರ್ಯಕ್ಕೆ ಪಕ್ಷದ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…