ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

741

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…