ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

ಮುಂಜಾನೆಯ ಒಂದು ಕಪ್ ಟೀ ಅಥವಾ ಕಾಫಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಹಾಗೂ ದೈಹಿಕವಾಗಿ ಚಟುವಟಿಕೆಯಿಂದಿರಲು ಈ ಪಾನೀಯಗಳು ಸಹಾಯಮಾಡುತ್ತವೆ ಎಂಬಿತ್ಯಾದಿ ಸಂಶೋಧನಾವರದಿಗಳು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಪ್ರಕಟವಾಗುತ್ತಲೇ ಇರುತ್ತವೆ. ಆದರೆ ಈ ಬಾರಿ ಕಾಫಿ ಮೇಲೆ ನಡೆದ ಒಂದು ಸಂಶೋಧನೆ ವಿಶೇಷ ವೆನಿಸಿಕೊಳ್ಳುತ್ತದೆ.

ಏಕೆಂದರೆ ಅದು ಗ್ಲ್ಯಾಮರ್ಗೆ ಸಂಬಂಧಿಸಿದ್ದು….! ಹೌದು, ತೆಳ್ಳಗೆ, ಬೆಳ್ಳಗೆ ಗ್ಲ್ಯಾಮರಸ್ ಆಗಿ ಕಾಣಬೇಕು ಅಂತಾ ಯಾರಿಗೆ ತಾನೆ ಆಸೆ ಇರಲ್ಲಾ ಹೇಳಿ.. ಈ ಗ್ಲ್ಯಾಮರಸ್ ಲುಕ್ ಒಂದು ಕಪ್ ಕಾಫಿಯಿಂದ ಬಂದರೆ ಮೇಕಪ್ ಪ್ರಿಯರಿಗೆ ಇದಕ್ಕಿಂತ ಖುಷಿ ಸುದ್ದಿ ಇನ್ನೇನಿದೆ ಹೇಳಿ ಇತ್ತೀಚಿನ ಸಂಶೋಧನೆಗಳಲ್ಲಿ ಕಾಫಿಯಲ್ಲಿ ಸೌಂದರ್ಯವರ್ಧಕ ಅಂಶಗಳಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಒಂದು ಸಂಶೋಧನೆಯ ಪ್ರಕಾರ ಕಾಫಿ ಸೇವಿಸುವುದರಿಂದ ಚರ್ಮಕ್ಕೂ ಸಾಕಷ್ಟು ಲಾಭಗಳು ಆಗುತ್ತವೆ ಎಂಬುದು ದೃಢಪಟ್ಟಿರುವುದು ಕಾಫಿ ಪ್ರಿಯರಲ್ಲಿ ಖುಷಿಯನ್ನುಉಂಟು ಮಾಡಿದೆ. ಕಾಫಿ ಈಗಾಗಲೇ ಅದ್ಭುತ ಪಾನಿಯ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದ್ದು, ಇದರ ಮುಂದುವರಿದ ಭಾಗವಾಗಿ ಚರ್ಮದ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಸುತ್ತದೆ.

ಕಾಫಿ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಅಂಶ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ವಾತಾವರಣದ ಬದಲಾವಣೆ ಮತ್ತು ಪರಿಸರದ ಮಾಲಿನ್ಯದಿಂದ ಚರ್ಮದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯುವಂತಹ ಶಕ್ತಿ ಕಾಫಿಗಿದೆ ಎಂದು ಹೇಳಲಾಗಿದೆ. ಸೂರ್ಯನ ಕಿರಣಗಳಿಂದಾಗುವ ಚರ್ಮದ ತೊಂದರೆಗಳನ್ನು ತಡೆಗಟ್ಟುವ ಶಕ್ತಿ ಇದಕ್ಕಿದೆ. ಚರ್ಮವನ್ನು ಮೃದು ಮತ್ತು ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.

ಕಾಫಿ ಸೇವನೆಯಿಂದ ರಕ್ತ ಚಲನೆ ಸರಾಗವಾಗಿ ಆಗುವುದರಿಂದ ಚರ್ಮ ಕೊಶಗಳು ಹೆಚ್ಚು ಕ್ರಿಯಾಶೀಲವಾಗುತ್ತದೆ. ಇದರ ಪರಿಣಾಮ ಚರ್ಮದ ರಕ್ಷಣೆಗೆ ಗ್ಲ್ಯಾಮರ್ಗೆ ಕಾರಣವಾಗುತ್ತದೆ. ಕಾಫಿ ಮೇಲೆ ನಡೆದ ಈ ಸಂಶೊಧನೆ ವರದಿ ಕಾಫಿ ಪ್ರಿಯಗರಿಗಷ್ಟೆ ಅಲ್ಲ ಈಗ ಗ್ಲ್ಯಾಮರ್ಪ್ರೀಯರಿಗೂ ಖುಷಿಯನ್ನು ಹೊತ್ತು ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…