ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…