ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…