ಸುದ್ದಿ

ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

67

ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ.

ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಶುಕ್ರವಾರ ಮಧ್ಯಾಹ್ನ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ‘ವಿಶೇಷವಾಗಿ ರೂಪಿಸಲಾಗಿರುವ ವ್ಯಾಗನ್‌(ನೀರು ಸಂಗ್ರಹಿಸಿಕೊಳ್ಳುವ ರೈಲು) ಮೂಲಕ ತರಲಾಗುವ ಕಾವೇರಿ ನೀರು, ಚೆನ್ನೈ ನಗರದ ಜನರ ನೀರಿನ ದಾಹ ತಣಿಸಲಿದೆ. ವ್ಯಾಗನ್‌ಗಳನ್ನು ಒಳಗೊಂಡ ಎರಡು ರೈಲು ಗಾಡಿಗಳು ನಿತ್ಯ ನಾಲ್ಕು ಬಾರಿ ನೀರು ತರಲಿವೆ. ತಲಾ 50,000 ಲೀಟರ್‌ ಸಾಮರ್ಥ್ಯದ, 50 ಟ್ಯಾಂಕ್‌ ವ್ಯಾಗನ್‌ಗಳ ಮೂಲಕ ರೈಲಿನಲ್ಲಿ ನೀರು ಸಾಗಿಸಲಾಗುತ್ತದೆ. ಹೀಗೆ ಸಾಗಿಸಲಾದ ನೀರನ್ನು ವ್ಯಾಗನ್‌ಗಳಿಂದ ಶುದ್ಧೀಕರಣ ಘಟಕಕ್ಕೆ ಪೈಪ್ ಗಳನ್ನು ಅಳವಡಿಸಿ ಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಮೂಲಗಳ ಪ್ರಕಾರ ಈ ರೈಲು ದಿನಕ್ಕೆ 1 ಕೋಟಿ ಲೀಟರ್ ನಂತೆ ಆರು ತಿಂಗಳ ವರೆಗೂ ಚೆನ್ನೈಗೆ ತಲುಪಿಸಲಿದೆ. ಜೋಲಾರ್ ಪೇಟೆಯಿಂದ ಸುಮಾರು 215 ಕಿ.ಮೀ. ದೂರ ಸಂಚಾರ ಮಾಡಿ ಮಧ್ಯಾಹ್ನ 12ರ ವೇಳೆಗೆ ಚೆನ್ನೈ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿತು. ಅತ್ತ ರೈಲಿನಿಂದ ನೀರು ಪಂಪಿಂಗ್ ಸ್ಟೇಷನ್ ಗೆ ತಲುಪುತ್ತಿದ್ದಂತೆಯೇ ಇತ್ತ ಚೆನ್ನೈನಾದ್ಯಂತ ವಾಟರ್ ಟ್ಯಾಂಕರ್ ಗಳ ಸಮೀಪ ನೆರೆದಿದ್ದ ಜನ ಸರತಿ ಸಾಲಲ್ಲಿ ನಿಂತು ನೀರನ್ನು ಸಂಗ್ರಹಿಸಿಕೊಂಡು ಮನೆಗೆ ತೆರಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಸುದ್ದಿ

    ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.   ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…