News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

79

ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ.

ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಶುಕ್ರವಾರ ಮಧ್ಯಾಹ್ನ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ‘ವಿಶೇಷವಾಗಿ ರೂಪಿಸಲಾಗಿರುವ ವ್ಯಾಗನ್‌(ನೀರು ಸಂಗ್ರಹಿಸಿಕೊಳ್ಳುವ ರೈಲು) ಮೂಲಕ ತರಲಾಗುವ ಕಾವೇರಿ ನೀರು, ಚೆನ್ನೈ ನಗರದ ಜನರ ನೀರಿನ ದಾಹ ತಣಿಸಲಿದೆ. ವ್ಯಾಗನ್‌ಗಳನ್ನು ಒಳಗೊಂಡ ಎರಡು ರೈಲು ಗಾಡಿಗಳು ನಿತ್ಯ ನಾಲ್ಕು ಬಾರಿ ನೀರು ತರಲಿವೆ. ತಲಾ 50,000 ಲೀಟರ್‌ ಸಾಮರ್ಥ್ಯದ, 50 ಟ್ಯಾಂಕ್‌ ವ್ಯಾಗನ್‌ಗಳ ಮೂಲಕ ರೈಲಿನಲ್ಲಿ ನೀರು ಸಾಗಿಸಲಾಗುತ್ತದೆ. ಹೀಗೆ ಸಾಗಿಸಲಾದ ನೀರನ್ನು ವ್ಯಾಗನ್‌ಗಳಿಂದ ಶುದ್ಧೀಕರಣ ಘಟಕಕ್ಕೆ ಪೈಪ್ ಗಳನ್ನು ಅಳವಡಿಸಿ ಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಮೂಲಗಳ ಪ್ರಕಾರ ಈ ರೈಲು ದಿನಕ್ಕೆ 1 ಕೋಟಿ ಲೀಟರ್ ನಂತೆ ಆರು ತಿಂಗಳ ವರೆಗೂ ಚೆನ್ನೈಗೆ ತಲುಪಿಸಲಿದೆ. ಜೋಲಾರ್ ಪೇಟೆಯಿಂದ ಸುಮಾರು 215 ಕಿ.ಮೀ. ದೂರ ಸಂಚಾರ ಮಾಡಿ ಮಧ್ಯಾಹ್ನ 12ರ ವೇಳೆಗೆ ಚೆನ್ನೈ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿತು. ಅತ್ತ ರೈಲಿನಿಂದ ನೀರು ಪಂಪಿಂಗ್ ಸ್ಟೇಷನ್ ಗೆ ತಲುಪುತ್ತಿದ್ದಂತೆಯೇ ಇತ್ತ ಚೆನ್ನೈನಾದ್ಯಂತ ವಾಟರ್ ಟ್ಯಾಂಕರ್ ಗಳ ಸಮೀಪ ನೆರೆದಿದ್ದ ಜನ ಸರತಿ ಸಾಲಲ್ಲಿ ನಿಂತು ನೀರನ್ನು ಸಂಗ್ರಹಿಸಿಕೊಂಡು ಮನೆಗೆ ತೆರಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…