ಸುದ್ದಿ

‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

60

‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ! ಹಾಗಾದರೆ, ‘ಕುರಿ’ ಲೈಫ್‌ ಅಲ್ಲಿ ಏನಾಯ್ತು? ಇಲ್ಲಿದೆ ಮಾಹಿತಿ.

ನಿಜ ಜೀವನದಲ್ಲಿ ‘ಕುರಿ’ ಪ್ರತಾಪ್‌ಗೆ ಏನು ಆಗಿಲ್ಲ, ಆಗಿರೋದು ರೀಲ್‌ ಲೈಫ್‌ ಅಲ್ಲಿ! ‘ಬಿಗ್ ಬಾಸ್‌’ ಮನೆಗೆ ಹೋಗುವುದಕ್ಕೂ ಮೊದಲು ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಆ ಸಿನಿಮಾದಲ್ಲಿ ‘ಕುರಿ’ಗೆ ಒಂದು ಡ್ಯುಯೆಟ್‌ ಸಾಂಗ್ ಇಡಲಾಗಿದೆ. ಇದೇ ಮೊದಲ ಬಾರಿಗೆ ಅವರು ನಾಯಕಿಯೊಂದಿಗೆ ಸಖತ್ ಆಗಿ ರೊಮ್ಯಾಂಟಿಕ್ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಫಸ್ಟ್‌ ಟೈಮ್‌ ಲೈಫಲಿ..’ ಎಂದು ಶುರುವಾಗುವ ಈ ಹಾಡಿನಲ್ಲಿ ‘ಕುರಿ’ ಪ್ರತಾಪ್ ಜತೆಗೆ ನಟಿ ಕಾರುಣ್ಯಾ ರಾಮ್ ಹೆಜ್ಜೆ ಹಾಕಿದ್ದಾರೆ. ಯುಟ್ಯೂಬ್‌ನಲ್ಲಿ ಈ ಹಾಡಿಗೆ ಮೆಚ್ಚುಗೆ ಸಿಕ್ಕಿದೆ.

ಮಂಜು ಸ್ವರಾಜ್ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಎಸ್‌.ವಿ. ಬಾಬು ಬಂಡವಾಳ ಹೂಡಿದ್ದಾರೆ. ವಿಶೇಷವೆಂದರೆ, ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಬರೀ ಹಾಸ್ಯ ಕಲಾವಿದರೇ ಪ್ರಮುಖ ಪಾತ್ರಗಳಲ್ಲಿದ್ಧಾರೆ. ಸಾಧು ಕೋಕಿಲ, ಚಿಕ್ಕಣ್ಣ, ರವಿಶಂಕರ್‌ ಗೌಡ ಪ್ರಧಾನ ಪಾತ್ರ ಮಾಡಿದ್ದಾರೆ. ‘ಕುರಿ’ಗೆ ಈ ಚಿತ್ರದಲ್ಲಿ ‘ರಾಕ್ ಸ್ಟಾರ್’ ರಾಜ ಎಂಬ ಪಾತ್ರ ನೀಡಲಾಗಿದೆ. ಚಿತ್ರದ ನಾಯಕಿಯಾಗಿ ಶ್ರುತಿ ಹರಿಹರನ್ ನಟಿಸಿದ್ದಾರೆ.

ಇನ್ನು, ‘ಬಿಗ್‌ ಬಾಸ್’ ಮನೆಯೊಳಗೆ ಇರುವ ‘ಕುರಿ’ ಪ್ರತಾಪ್‌ ಕಿರುತೆರೆ ವೀಕ್ಷಕರಿಗೆ ಸಖತ್ ಮನರಂಜನೆ ನೀಡುತ್ತಿದ್ದಾರೆ. ತಮ್ಮ ಮ್ಯಾನರಿಸಂ ಮತ್ತು ಇಂಗ್ಲಿಷ್ ಮೂಲಕ ನೋಡುಗರನ್ನು ನಗೆಗಡಲ್ಲಿ ತೇಲಿಸುತ್ತಿದ್ದಾರೆ. ಅಲ್ಲದೆ, ಈ ಬಾರಿ ಗ್ರ್ಯಾಂಡ್ ಫಿನಾಲೆ ತಲುಪುವ ಸಂಭವನೀಯ ಸ್ಪರ್ಧಿಗಳಲ್ಲಿ ಕುರಿ ಕೂಡ ಒಬ್ಬರು ಎಂಬ ಮಾತುಗಳು ಕೇಳಿಬರುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…