ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…