ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…