News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

925

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ  ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. 

ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್‌ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್‌ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.

ಅಗತ್ಯವಿರುವ ಸಾಮಾಗ್ರಿಗಳು:

* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ . 

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.

 * ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ. 

* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

ಈ ಪೇಯವನ್ನು ತಯಾರಿಸುವ ಬಗೆ

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.