News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

925

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ  ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. 

ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್‌ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್‌ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.

ಅಗತ್ಯವಿರುವ ಸಾಮಾಗ್ರಿಗಳು:

* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ . 

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.

 * ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ. 

* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

ಈ ಪೇಯವನ್ನು ತಯಾರಿಸುವ ಬಗೆ

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading