News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

923

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ  ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. 

ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್‌ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್‌ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.

ಅಗತ್ಯವಿರುವ ಸಾಮಾಗ್ರಿಗಳು:

* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ . 

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.

 * ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ. 

* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

ಈ ಪೇಯವನ್ನು ತಯಾರಿಸುವ ಬಗೆ

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…