News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಶಿಕ್ಷಣ

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

2646

ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳ ಪಟ್ಟಿ :-

1) ಪ್ರಾಚೀನ ಭಾರತದ ಇತಿಹಾಸ – ಭಾರತ ಸರ್ಕಾರದ ಪ್ರಚಾರ ವಿಭಾಗ

2) ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಸಮಗ್ರ ಇತಿಹಾಸ – ಎಚ್.ಎನ್.ಬಸವರಾಜ

3) ಸಮಗ್ರ ಭಾರತದ ಇತಿಹಾಸ – ಡಾ|| ಕೆ.ಸದಾಶಿವ

4) ಕರ್ನಾಟಕ ಪರಂಪರೆ ಭಾಗ -೧

5) ಕರ್ನಾಟಕ ಪರಂಪರೆ ಭಾಗ -೨ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಪ್ರಕಟಿತ)

6) ಸ್ವತಂತ್ರ ಭಾರತ -1942 ರಿಂದ 2010 – ಪಾಲಾಕ್ಷ

7) ಆಧುನಿಕ ಭಾರತದ ಇತಿಹಾಸ – ಲೇ : ಕೆ.ನಾರಾಯಣ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

8) ಕರ್ನಾಟಕ ಇತಿಹಾಸ – ಕೆ.ನಾರಾಯಣ

9) ಸ್ವತಂತ್ರ ಭಾರತ – ಕೆ.ನಾರಾಯಣ

10) ಕರ್ನಾಟಕ ಇತಿಹಾಸ – ಕ್ರಿ.ಶ. 1800-1956

11) ನಮ್ಮ ನಾಡು ಕರ್ನಾಟಕ – ಎಚ್.ಎಸ್.ಗೋಪಾಲರಾವ್12 ಸಮಗ್ರ ಕರ್ನಾಟಕ – ಪಾಲಾಕ್ಷ

13) ಕರ್ನಾಟಕ ಪ್ರವಾಸಿ ತಾಣಗಳು – ಶೇಷುನಾಥನ್ (ಸಾಧನಾ ಪ್ರಕಾಶನ ಬೆಂಗಳೂರು)

14) ಕರ್ನಾಟಕ ಕೈಗನ್ನಡಿ – ಸೂರ್ಯನಾಥ ಕಾಮತ್

15) ಪೂರ್ವ ಇತಿಹಾಸ – ಇರ್ಫಾನ್ ಹಬೀಬ್ (ಚಿಂತನ ಪ್ರಕಾಶನ, ಶಿರಸಿ)

16) ಸಾಮಾನ್ಯ ಭಾರತದ ಅರ್ಥಶಾಸ್ತ್ರ – ನೇ.ತಿ. ಸೋಮಶೇಖರ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)

17) ಭಾರತ ಸಂವಿಧಾನ – ಯಡಿಯೂರಪ್ಪ ತುಮಕೂರು

18) ಭಾರತ ಸಂವಿಧಾನ ಮತ್ತು ರಾಜಕೀಯ – ಎಚ್.ಎಮ್. ರಾಜಶೇಖರ

19) ನಮ್ಮ ನ್ಯಾಯಾಂಗ – ಬಿ.ಆರ್.ಅಗರವಾಲ್

20) ನಮ್ಮ ಸಂಸತ್ತು – ಸುಭಾಶ ಕಶ್ಯಪ್

21) ಭಾರತದ ಆರ್ಥಿಕ ಭೂಗೋಳಶಾಸ್ತ್ರ – ಪಿ.ಮಲ್ಲಪ್ಪ

22) ಭಾರತದ ಪ್ರಾದೇಶಿಕ ಮತ್ತು ಆರ್ಥಿಕ ಭೂಗೋಳಶಾಸ್ತ್ರ – ರಂಗನಾಥ

23) ಭೂಗೋಳ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

24) ಇತಿಹಾಸ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ

25) ಕರ್ನಾಟಕ ವಿಶ್ವಕೋಶ ಭಾಗ -1

26) ಕರ್ನಾಟಕ ವಿಶ್ವಕೋಶ ಭಾಗ -2ಮೈಸೂರು ವಿಶ್ವವಿದ್ಯಾಲಯ

27) ಭಾರತದ ಆರ್ಥಿಕ ವ್ಯವಸ್ಥೆ – ಎಚ್.ಆರ್. ಕೃಷ್ಣೇಗೌಡ

28) ಕರ್ನಾಟಕದ ಆರ್ಥಿಕತೆ – ನೀ.ತಿ.ಸೋಮಶೇಖರ

29) ಕರ್ನಾಟಕ ಭೂಗೋಳ – ಪಿ.ಮಲ್ಲಪ್ಪ

30) ವಿಜ್ಞಾನ ಕಲಿಯೋಣ ಭಾಗ -1,2,3,4 – ಸಿ.ಎನ್.ಆರ್.ರಾವ್ ಮತ್ತು ಇಂದುಮತಿ ರಾವ್ – ನ್ಯಾಷನಲ್ ಬುಕ್ ಟ್ರಸ್ಟ್

31) ಜ್ಞಾನ ವಿಜ್ಞಾನ ಕೋಶ – ನವಕರ್ನಾಟಕ ಪ್ರಕಾಶನ

32) ನವಕರ್ನಾಟಕ ವಿಜ್ಞಾನ ಮಾಲಿಕೆಗಳು – 14 ಸರಣಿ

33) ಇದು ನಮ್ಮ ಕರ್ನಾಟಕ – ಚಾಣಕ್ಯ ಪ್ರಕಾಶನ

34) ಕನ್ನಡ ಕನ್ನಡಿಗ ಕರ್ನಾಟಕ – ಎಂ.ಚಿದಾನಂದ ಮೂರ್ತಿ

(dont buy all books, see the syllabus and according to that buy which ever you want)

Also refer:-                                                                                                  

NCRET and DCRET text books internet/web portals,

Kannada & English news papers,

Manorama, Indian year books, etc… yojana,

chronicle like magazines, some notes prepared by coaching institutes

 

2017ನೆ ಸಾಲಿನ ಕೆ.ಎ.ಎಸ್.(KAS) ಟಾಪರ್ ಐಶ್ವರ್ಯ ರವರ ಸಂಗ್ರಹ ಚಿತ್ರ.

ಕೆ.ಎ.ಎಸ್.(KAS) ಪರೀಕ್ಷೆಯ ತಯಾರಿಗಾಗಿ ಅಭ್ಯರ್ಥಿಯಲ್ಲಿ ಈ ಕೆಳಗಿನ ಗುಣಗಳು ಇರಬೇಕು :-

* ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು.

* ಪರೀಕ್ಷೆ ತಯಾರಿ ಮಾಡುವುದು ಬೇರೆ. ಅದರಲ್ಲಿ ಇಳಿಯುವುದು ಬೇರೆ. ಇಲ್ಲಿ ಪರೀಕ್ಷೆಗಾಗಿ ಆಳವಾದ ಅಧ್ಯಯನ ಮಾಡಬೇಕು. ಸಮುದ್ರ ಮೇಲ್ಗಡೆ ತೆರೆಗಳು ಹೆಚ್ಚಾಗಿ ಇರುವುವು. ಆದರೆ ಒಳಗೆ ಹೋದಂತೆ ಅಲ್ಲಿ ಪ್ರಶಾಂತತೆ ಇರುವುದು. ಅದೇ ರೀತಿ ಮೇಲ್ನೋಟಕ್ಕೆ ತಯಾರಿ ನಡೆಸಿದಾಗ ಮೈಂಡ್ ಡಿಸ್ಟರ್ಬ್ ಜಾಸ್ತಿ ಇರುವುದು. ಅದರಲ್ಲಿ ಆಳವಾಗಿ ತೊಡಗಿದಾಗ ನಮ್ಮ ಓದಿಗೆ ಡಿಸ್ಟರ್ಬ್ ಕಡಿಮೆಯಾಗುವುದು.

* ಪರೀಕ್ಷೆಗಾಗಿ ನಿಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದರಿಂದ ಹೊರಗೆ ಬರಬಾರದು. ಅದನ್ನು ದೃಢತೆ ಎನ್ನುವರು. ದೃಢವಾದ ಮನಸ್ಸು ಇಟ್ಟು ತಯಾರಿ ನಡೆಸಬೇಕು. ಕೆಲವರು ಕೆ.ಎ.ಎಸ್. ಪರೀಕ್ಷೆಗಾಗಿ ಪೂರ್ಣ ತಯಾರಿ ನಡೆಸಿದ್ದಾಗ, ಇನ್ನೊಂದು ಪರೀಕ್ಷೆ ಕಾಲ್ ಫಾರ್ಂ ಆದ ಕೂಡಲೇ ಕೆ.ಎ.ಎಸ್. ಅಲ್ಲೇ ಬಿಟ್ಟು ಇನ್ನೊಂದು ಪರೀಕ್ಷೆಗೂ ತಯಾರಿ ನಡೆಸುತ್ತಾರೆ. ಅದನ್ನು ಪೂರ್ಣಗೊಳಿಸದೆ, ಮತ್ತೊಂದು ಪರೀಕ್ಷೆಗೆ ಜಿಗಿಯುತ್ತಾರೆ. ಇಂಥವರು ಯಾವ ಪರೀಕ್ಷೆಯಲ್ಲಿಯೂ ಯಶಸ್ವಿಯಾಗುವುದಿಲ್ಲ.

* ಇಂಥ ಪರೀಕ್ಷೆ ತಯಾರಿ ನಡೆಸಿದಾಗ ನಿಮ್ಮ ಮನಸ್ಸನ್ನು ಆಕರ್ಷಣೆಯಿಂದ ದೂರ ಇಡಬೇಕು. ಆಕರ್ಷಣೆಗೆ ಒಳಗಾಗಿ ಓದುತ್ತಾ ಇದ್ದಾಗ ಅಭ್ಯಾಸ ಪರಿಪೂರ್ಣವಾಗುವುದಿಲ್ಲ. ಮುಗ್ಧ ಮನಸ್ಸು ಏಕಾಗ್ರತೆಗೊಳ್ಳುವುದಿಲ್ಲ. ಯಾವುದೋ ಭಾವಲೋಕದಲ್ಲಿ ಓದುತ್ತಾ ಇರುವುವರು ಅವರು ಎಷ್ಟೇ ಗಂಟೆ ಓದಿದರೂ ಕೂಡಾ, ತಾವು ಯಾವುದು ಓದಿದ್ದು ಎಂಬುದು ಗೊತ್ತಿರುವುದಿಲ್ಲ.

* ಈ ಪರೀಕ್ಷೆಗೆ ಏಷ್ಟು ಗಂಟೆ ತಯಾರಿ ನಡೆಸಬೇಕು ಎಂಬ ಪ್ರಶ್ನೆ ಬಹಳಷ್ಟು ಅಭ್ಯರ್ಥಿಗಳ ಪ್ರಶ್ನೆಯಾಗಿದೆ. ನನ್ನ ಪ್ರಕಾರ ಕನಿಷ್ಠ 12 ರಿಂದ 14ತಾಸು ಓದಬೇಕು. ಕೆಲವರಿಗೆ ಗಾಬರಿಯಾಗಬಹುದು. ಇದಕ್ಕಿಂತ ಕಡಿಮೆ ಅವಧಿಯನ್ನು ತೆಗೆದುಕೊಂಡರೆ, ವಿಷಯವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲವೆನೋ ಎಂದು ಕೆಲವರು ಹೇಳುವ ಪ್ರಕಾರ ಎಷ್ಟು ಗಂಟೆ ಓದುವುದು ಮುಖ್ಯವಲ್ಲ ಎಷ್ಟು ವಿಷಯ ತಿಳಿದುಕೊಂಡೆವು ಎಂಬುವುದು ಮುಖ್ಯವಾಗುತ್ತದೆ. ಆದರೆ, ಅಧ್ಯಯನಕ್ಕೆ ಕೂಡುವ ಅವಧಿ ಹೆಚ್ಚಿದಂತೆ, ಸಹಜವಾಗಿ ಏಕಾಗ್ರತೆ ಹಾಗೂ ಅರ್ಥ ಮಾಡಿಕೊಳ್ಳುವುದು.

* ಸಾಮಾನ್ಯವಾಗಿ ಯಾವ ಸಮಯದಲ್ಲಿ ಓದಬೇಕು ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಇಲ್ಲಿ ಯಾವ ಸಮಯದಲ್ಲಿ ಓದುತ್ತೇನೆ ಎಂಬುದು ಮುಖ್ಯವಲ್ಲ. ಯಾವುದೇ ಸಮಯದಲ್ಲಿ ಓದಿ ಆದರೆ, ಮನಸ್ಸು ಕೊಟ್ಟು ಅಧ್ಯಯನ ಮಾಡಿ. ಸಾಮಾನ್ಯವಾಗಿ ಇಂಥ ಪರೀಕ್ಷೆಗೆ ತಯಾರಿ ನಡೆಸುವವರು ರಾತ್ರಿಯೇ ಹೆಚ್ಚು ಅಧ್ಯಯನ ಮಾಡುತ್ತಾರೆ.

* ಈ ಪರೀಕ್ಷೆಗೆ ವಿಶೇಷ ತಯಾರಿ ಹಾಗೂ ಪರಿಶ್ರಮ ಬೇಕಾಗುವುದು. ಅದಕ್ಕಾಗಿ ಸಹನೆ ಇರಬೇಕು. ನಿರಂತರ ಓದುತ್ತಾ ಇದ್ದಾಗ, ಅದನ್ನು ಬಿಟ್ಟು ಓಡಿಹೋಗೋಣ ಎಂಬ ಮನಸ್ಸು ಬರುತ್ತದೆ. ಕೆಲವರು 11ಹೆಜ್ಜೆವರೆಗೆ ಬಂದಿರುತ್ತಾರೆ. ಇನ್ನೊಂದು ಹೆಜ್ಜೆ ಇಟ್ಟರೆ, ಗುರಿ ಮುಟ್ಟಲು ಸಾಧ್ಯವಿರುತ್ತದೆ. ಅದನ್ನು ಗುರ್ತಿಸದೆ, ಸಹನೆ ಕಳೆದುಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ. ಓಡಿ ಹೋಗುತ್ತಾರೆ.

* ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ತಯಾರಿ ಮಾಡುವಾಗ ನಮ್ಮ ಓದು ಎಷ್ಟು ಮುಖ್ಯವಾಗಿರುತ್ತದೆ. ಅಷ್ಟೇ ಮುಖ್ಯ ನಮಗೆ ಪ್ರೇರಣೆ ಹಾಗೂ ಸ್ಫೂರ್ತಿ. ಅದಕ್ಕಾಗಿ ಈಗಾಗಲೇ ಯಶಸ್ವಿಯಾದವರ ಸಂದರ್ಶನ ಓದಿ ಹಾಗೂ ಕೆ.ಎ.ಎಸ್. ಪರೀಕ್ಷೆಗೆ ಸಂಬಂಧಪಟ್ಟ ಸೆಮಿನಾರ್‌ಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮನಸ್ಸು ಗಟ್ಟಿಯಾಗುತ್ತದೆ. ನಮ್ಮ ಸ್ಪರ್ಧಾ ಚಾಣಕ್ಯ ಪತ್ರಿಕೆಯಲ್ಲಿ ಪ್ರತಿ ತಿಂಗಳು ಸಾಧಕರ ಬಗ್ಗೆ ಪ್ರಕಟಿಸಿದ್ದೇವೆ. ಒಮ್ಮೆ ಓದಿ ನೋಡಿ. ಸಾಧಿಸಲು ಅವರು ತೆಗೆದುಕೊಂಡ ಸಮಯ, ಯಶಸ್ಸಿಗಾಗಿ ಪಟ್ಟ ಪರಿಶ್ರಮ ಎಲ್ಲವೂ ಗೊತ್ತಾಗುತ್ತದೆ.

* ಓದುವಾಗ ಯಾವುದೇ ವಿಷಯ ತಿಳಿಯದಿದ್ದಾಗ ಗಾಬರಿಯಾಬೇಡಿ. ಎಲ್ಲರಿಗೂ ಎಲ್ಲಾ ವಿಷಯ ಗೊತ್ತಿರುವುದಿಲ್ಲ. ಯಾಕೆಂದರೆ ಯಾರೂ ಇಲ್ಲಿಯವರೆಗೆ 100ಕ್ಕೆ 100ಅಂಕಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲ. ಕೆಲವರು ಒಂದೂ ಪ್ರಶ್ನೆ ಬರದಿದ್ದಾಗ ನಾನು ದಡ್ಡನೆಂಬ ಭಾವನೆ ಬೆಳೆಸಿಕೊಂಡು ಉತ್ಸಾಹ ಕಳೆದುಕೊಳ್ಳುತ್ತಾರೆ.

* ಕೆಲವರಿಗೆ ಈ ಪರೀಕ್ಷೆ ಎಂದರೆ ಪುಸ್ತಕಗಳನ್ನು ಸಂಗ್ರಹಿಸುವುದು ಎಂದು ತಿಳಿದುಕೊಂಡು ಎಲ್ಲಾ ಪುಸ್ತಕಗಳನ್ನು ಖರೀದಿಸುತ್ತಾರೆ. ಆದರೆ, ಯವುದನ್ನು ಪೂರ್ಣವಾಗಿ ಓದುವುದಿಲ್ಲ. ಉತ್ತಮ ಪುಸ್ತಕಗಳು ಇದ್ದರೆ ಸಾಕು. ಮುಂದಿನ ಸಂಚಿಕೆಯಲ್ಲಿ ಕೆ.ಎ.ಎಸ್. ಪರೀಕ್ಷೆ ತಯಾರಿಗೆ ಇರುವ ಉತ್ತಮ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸುತ್ತೇವೆ.

* ಉನ್ನತ ಪರೀಕ್ಷೆ ಬರೆಯಬೇಕಾದರೆ ಅಧ್ಯಯನದ ಕೊಠಡಿಯು ಕೂಡ ಅಷ್ಟೇ ಉತ್ತಮವಾಗಿರಬೇಕು. ಅಲ್ಲಿಯ ವಾತಾವರಣ ಬಹಳ ಚೆನ್ನಾಗಿರಬೇಕು. ಒಂದು ವೇಳೆ ನೀವು ಇರುವ ರೂಮಿನಲ್ಲಿ ಎಲ್ಲರೂ ಕೆ.ಎ.ಎಸ್. ಆಕಾಂಕ್ಷಿಗಳು ಇದ್ದರೆ ಚೆಂದ. ಬೇರೆ ಪರೀಕ್ಷೆಗೆ ತಯರಾಗುವವರ ಜೊತೆ ಇರಬಾರದು. ಯಾಕೆಂದರೆ, ನಿಮ್ಮದೇ ಕೆ.ಎ.ಎಸ್. ವಾತಾವರಣ ಇರುವುದಿಲ್ಲ. ಹಾಗೂ ಸ್ಫೂರ್ತಿ ಉಂಟಾಗುವುದಿಲ್ಲ.

* ಬೇರೆಯವರು ಓದುವುದನ್ನು ನೋಡಿ, ಅವರ ಪುಸ್ತಕಗಳ ಸಂಗ್ರಹ ನೋಡಿ, ಅವರ ಚರ್ಚೆಯನ್ನು ನೋಡಿ ನೀವು ಗಾಬರಿಯಾಗಬೇಡಿ. ಯಾವತ್ತೂ ಮತ್ತೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಓದುವಾಗ ನಿಮ್ಮದೇ ಶೈಲಿ ರೂಢಿಸಿಕೊಂಡು ಓದಬೇಕು.

* ಓದುವಾಗ ಮುಖ್ಯವಾದ ವಿಷಯಗಳನ್ನು ಕುರಿತು ನಿಮ್ಮದೇ ಆದ ನೋಟ್ಸ್ ಮಾಡಿಕೊಳ್ಳುವುದು ಉತ್ತಮ. ಸಮಯ ಇರದಿದ್ದಾಗ ಮಾತ್ರ ಪುಸ್ತಕದಲ್ಲಿ ಅಂಡರಲೈನ್ ಮಾಡಿಕೊಳ್ಳಿ. ಇದರಿಂದ ವೇಗವಾಗಿ ಪುನರ್ ಅಧ್ಯಯನ ಮಾಡಲು ಹಾಗೂ ನೆನಪಿಟ್ಟುಕೊಳ್ಳಲು ಸುಲಭವಾಗುತ್ತದೆ.

* ಇದಕ್ಕಾಗಿ ಗೆಳೆಯರ ಗುಂಪು ಮಾಡಿಕೊಳ್ಳಿ. ಯಾವುದೇ ಕಾರಣಕ್ಕೂ ಏಕಾಂಗಿ ಓದಬೇಡಿ. ಗುಂಪು ಚರ್ಚೆ ಮಾಡುವಾಗ ಹೊಸ ಹೊಸ ವಿಷಯ ತಿಳಿಯುವುದು ಅಲ್ಲದೆ ಚರ್ಚೆ ಮಾಡಿದ ವಿಷಯವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.

* ಚರ್ಚೆ ಹರಟೆಯಾಗಬಾರದು. ಓದು ಆಯಾಸವಾಗಬಾರದು ಹಾಗೂ ನಿರಂತರ ಉತ್ಸಾಹ ನಿಮ್ಮಲ್ಲಿ ಇರಬೇಕಾದರೆ, ಪ್ರತಿನಿತ್ಯ ಕನಿಷ್ಠ ಅರ್ಧಗಂಟೆಯಾದರೂ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನ ಮಾಡಬೇಕು. ಇದರಿಂದ ನಮ್ಮ ದೇಹಕ್ಕೆ ಶುದ್ಧವಾದ ಆಮ್ಲಜನಕ ಪೂರೈಕೆಯಾಗುವುದಲ್ಲದೆ, ರಕ್ತ ಪರಿಚಲನೆ ನಿಯಮಿತಗೊಳ್ಳುವುದು. ಇದರಿಂದ ಉತ್ಸಾಹ ಹೆಚ್ಚಾಗುತ್ತದೆ. ಪ್ರಾಮಾಣಿಕವಾಗಿ ನಿಮ್ಮನ್ನು ಪರೀಕ್ಷೆಯಲ್ಲಿ ತೊಡಗಿಸಿಕೊಂಡರೆ, ನಿಮ್ಮ ತಯಾರಿ ಉತ್ತಮವಾಗಿರುತ್ತದೆ. ಯಾವುದೇ ಕಾರಣಕ್ಕೂ ಉತ್ಸಾಹ ಕಳೆದುಕೊಳ್ಳದೆ, ಒಂದೇ ಮನಸ್ಸಿನಿಂದ ತಯಾರಿಯಲ್ಲಿ ತೊಡಗಿಸಿಕೊಳ್ಳಿ. ನಿಲ್ಲಬೇಡಿ, ಮುನ್ನುಗ್ಗಿರಿ, ಯಶಸ್ಸು ಸಿಗಲಿ.

* ನಿಮ್ಮದೇ ಆದ ಟೈಮ್ ಟೇಬಲ್ ಹಾಕಿಕೊಳ್ಳಬೇಕು. ಪ್ರಾರಂಭದಲ್ಲಿ ಟೈಮ್ ಟೇಬಲ್ ಪಾಲನೆ ಮಾಡದೇ ಹೋಗಬಹುದು. ಆದರೆ, ನೀವು ನಿರಂತರವಾಗಿ ಪಾಲನೆ ಮಾಡಿದಂತೆ ರೂಢಿಯಾಗುತ್ತದೆ. ಟೈಮ್ ಟೇಬಲ್ ಇಲ್ಲದಿದ್ದರೆ, ಒಂದು ವಿಷಯ ಹೆಚ್ಚು ಓದುತ್ತೀರಿ, ಇನ್ನೊಂದು ವಿಷಯವನ್ನು ಕಡಿಮೆ ಓದುತ್ತೀರಿ. ನಾನು ಮಾಡೇ ಮಾಡ್ತೀನಿ ಎಂಬ ವಿಶ್ವಾಸ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಮ್ಮ ಮೇಲಿನ ನಂಬಿಕೆಯನ್ನು ಹಾಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…