Place

ಕೇದಾರನಾಥ ದೇವಾಲಯ

63

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.



ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.


ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.

ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.



ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.


ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…