ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.

ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.

ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.
ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.

ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.

ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…