News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
Place

ಕೇದಾರನಾಥ ದೇವಾಲಯ

67

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.



ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.


ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.

ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.



ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.


ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…