ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.

ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.

ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.
ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.

ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.

ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()