ಸುದ್ದಿ

ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

41

ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ.

ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ ಹೆಚ್ಚಾಗುತ್ತಾ ಬಂತು. ಈವರೆಗೆ ಮೃಗೇಂದ್ರ ಬರೋಬ್ಬರಿ 135 ಪುಸ್ತಕಗಳನ್ನು ಬರೆದಿದ್ದಾನೆ. `ಆಜ್ ಕಾ ಅಭಿಮನ್ಯು’ ಎಂಬ ಕಾವ್ಯನಾಮದಲ್ಲಿ ಮೃಗೇಂದ್ರ ಪುಸ್ತಕಗಳನ್ನು ಬರೆಯುತ್ತಿದ್ದಾನೆ.

ಮೃಗೇಂದ್ರನ ತಾಯಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ತಮ್ಮ ಮಗ ಪುಸ್ತಕಗಳನ್ನು ಬರೆಯುವ ಬಗ್ಗೆ ತೋರಿಸುತ್ತಿದ್ದ ಆಸಕ್ತಿಯನ್ನು ಗುರುತಿಸಿ ಆತನನ್ನು ಬೆಂಬಲಿಸಿದ್ದಾರೆ. ಜೊತೆಗೆ ಆತನ ತಂದೆ ರಾಜ್ಯ ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.ಈ ಬಗ್ಗೆ ಮಾತನಾಡಿದ ಬಾಲಕ, ನಾನು ರಾಮಾಯಣದಲ್ಲಿರುವ 51 ಪಾತ್ರಗಳ ಬಗ್ಗೆ ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದೇನೆ. ನಾನು ಬರೆದ ಎಲ್ಲಾ ಪುಸ್ತಕಗಳು 25 ರಿಂದ 100 ಪುಟಗಳನ್ನು ಹೊಂದಿದೆ. ನನ್ನ ಈ ಪ್ರತಿಭೆಯನ್ನು ಮೆಚ್ಚಿ ಡಾಕ್ಟರೇಟ್ ಪದವಿ ನೀಡುವುದಾಗಿ ಲಂಡನ್ ವರ್ಲ್ಡ್ ಯೂನಿವರ್ಸಿಟಿ ಆಫ್ ರೆಕಾರ್ಡ್ಸ್ ಆಫರ್ ನೀಡಿತ್ತು ಎಂದು ತಿಳಿಸಿದ್ದಾನೆ.

ದೊಡ್ಡವನಾದ ಮೇಲೆ ನಾನು ಬರಹಗಾರನಾಗಲು ಇಷ್ಟಪಡುತ್ತೇನೆ. ವಿವಿಧ ವಿಷಯಗಳ ಬಗ್ಗೆ, ಬೇರೆ ಬೇರೆ ಆಯಾಮದಲ್ಲಿ ಇನ್ನೂ ಹಲವಾರು ಪುಸ್ತಕಗಳನ್ನು ಬರೆಯಲು ಬಯಸುತ್ತೇನೆ ಎಂದಿದ್ದಾನೆ.ಉತ್ತರ ಪ್ರದೇಶ ಸಿಎಂ ಯೋಗಿ ಆಧಿತ್ಯನಾಥ್ ಸೇರಿದಂತೆ ಹಲವು ಗಣ್ಯರ ಬಗ್ಗೆ ಈ ಪೋರ ಪುಸ್ತಕ ಬರೆದಿದ್ದು, ಚಿಕ್ಕವಯಸ್ಸಿನಲ್ಲೇ ಈ ಮಟ್ಟಿಗೆ ಸಾಧನೆ ಮಾಡಿರುವುದಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…