ಆಟೋಮೊಬೈಲ್ಸ್

ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

215

ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ.

ಹೋಂಡಾ ಕಂಪನಿಯು ಮುಂದಿನ 2020ರಲ್ಲಿ ಈ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ ಮತ್ತು 2019ರಲ್ಲಿ ಈ ಎಲೆಕ್ಟ್ರಿಕ್ ವಾಹನದ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ಸದ್ಯ ಈ ಹೋಂಡಾ ವಿದ್ಯುತ್ ವಾಹನದ ಬಗ್ಗೆ ಹೆಚ್ಚಿನ ವಿವರಗಳನ್ನು ಕಂಪನಿ ಬಹಿರಂಗಪಡಿಸಿದೆ.

2020ರ ಹೊತ್ತಿಗೆ ಬಿಡುಗಡೆಯಾಗುವ ಈ ಹೋಂಡಾ ವಿದ್ಯುತ್ ವಾಹನವನ್ನು ಕೇವಲ 15 ನಿಮಿಷ ಸಮಯದಲ್ಲಿ ಚಾರ್ಜ್ ಮಾಡಬಹುದಾಗಿದೆ ಎಂದು ವರದಿ ಹೇಳಿದೆ. ವಿದ್ಯುತ್ ವಾಹನಗಳು ಕಡಿಮೆ ಸಮಯದಲ್ಲಿ ಚಾರ್ಜ್ ಆಗುವಂತಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಕಡೆ ಹಲವಾರು ತಯಾರಕರು ಕಂಪನಿಗಳು ಈಗಾಗಲೇ ಕಾರ್ಯೋನ್ಮುಕವಾಗಿದ್ದು, ಹೋಂಡಾ ಕಂಪನಿಯ ಈ ಸುದ್ದಿ ಸದ್ಯ ಹೆಚ್ಚು ಚರ್ಚೆಗೆ ಕಾರಣವಾಗಿದೆ.

ಆಧುನಿಕ ಜಗತ್ತಿನಲ್ಲಿ 1 ಗಂಟೆ ಅಥವಾ 2 ಗಂಟೆ ಕೂತು ವಾಹನ ಚಾರ್ಜ್ ಮಾಡುವ ಸಮಯ ಯಾರ ಬಳಿಯೂ ಇಲ್ಲ ಎನ್ನಬಹುದು. ಅದರಲ್ಲಿಯೂ ದಿನ ಬೆಳಗ್ಗೆ ಎದ್ದು ಚಾರ್ಜ್ ಮಾಡುವಷ್ಟು ತಾಳ್ಮೆ ಯಾರು ಇಟ್ಟುಕೊಂಡಿರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಹೋಂಡಾ ಕಂಪನಿ ನೀಡಿರುವ ಈ ಸುದ್ದಿ ಪರಿಸರ ಸ್ನೇಹಿ ವಾಹನ ಪ್ರಿಯರಿಗೆ ಖುಷಿ ನೀಡಿದೆ.

 

ಕೇವಲ 15 ನಿಮಿಷಗಳ ಚಾರ್ಜಿಂಗ್ ಸಮಯದೊಂದಿಗೆ ಈ ವಾಹನವು 241 ಕಿ.ಮೀ ವ್ಯಾಪ್ತಿಯನ್ನು ತಲುಪಲಿದೆ. ಅಂತಹ ಕಡಿಮೆ ಚಾರ್ಜಿಂಗ್ ಸಮಯವನ್ನು ಸಾಧಿಸಲು, ಹೋಂಡಾ ಕಂಪನಿಯು ಅಲ್ಟ್ರಾ ಫಾಸ್ಟ್ ಚಾರ್ಜರ್‌ಗಳೊಂದಿಗೆ ಹೊಸ ಬ್ಯಾಟರಿ ಅಳವಡಿಸಿದೆ.

ಹೊಸ ಬ್ಯಾಟರಿಗಳನ್ನು ಪೂರೈಸಲು ಮತ್ತೊಂದು ಕಂಪನಿಯೊಂದಿಗೆ ಕೈಜೋಡಿಸಲಿದೆಯೇ ಕಾದು ನೋಡಬೇಕಾಗಿದೆ. ವೇಗದ ಚಾರ್ಜಿಂಗ್ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಮೊದಲು, ಕ್ರಮವಾಗಿ 2019 ಮತ್ತು 2020ರಲ್ಲಿ ಯೂರೋಪ್ ಮತ್ತು ಜಪಾನ್ ಸಮೂಹ-ಮಾರುಕಟ್ಟೆಗೆ ಹೊಸ ವಿದ್ಯುತ್ ವಾಹನಗಳನ್ನು ಪ್ರಾರಂಭಿಸುವ ಯೋಜನೆಯನ್ನು ಹೋಂಡಾ ಹೊಂದಿದೆ.

ಇತರ ರಾಷ್ಟ್ರಗಳಂತೆಯೇ, ಶುದ್ಧ ವಿದ್ಯುತ್ ವಾಹನಗಳಿಗೆ ಭಾರತವೂ ಸಹ ಹೆಚ್ಚು ಒತ್ತು ನೀಡುತ್ತಿದೆ. ಆದರೆ, ಮೂಲ ಸೌಕರ್ಯಗಳನ್ನು ಇಲ್ಲದೆ ಈ 2030 ಮಿಷನ್ ಸಾಧಿಸುವುದು ಕಷ್ಟ ಸಾಧ್ಯವಾಗಲಿದೆ. ಈ ಬಗ್ಗೆ ಕೇಂದ್ರ ಗಮನಹರಿಸಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…