ಆಟೋಮೊಬೈಲ್ಸ್

ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

235

ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.

ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.

ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.

ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.

ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…