ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.

ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.
ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.

ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.

ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…