ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.
ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ ಪದ್ಮರಾಗ , ಸ್ವರ್ಣ ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.
ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.
೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…