India, Place

ಕೈಲಾಸ ಪರ್ವತ

310

ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.

ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ  ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ  ಪದ್ಮರಾಗ , ಸ್ವರ್ಣ  ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.

ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.

೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…