ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.
ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ ಪದ್ಮರಾಗ , ಸ್ವರ್ಣ ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.
ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.
೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…