ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.
ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ ಪದ್ಮರಾಗ , ಸ್ವರ್ಣ ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.
ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.
೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…