ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.
ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ ಪದ್ಮರಾಗ , ಸ್ವರ್ಣ ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.
ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.
೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ