News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
India, Place

ಕೈಲಾಸ ಪರ್ವತ

386

ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.

ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ  ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ  ಪದ್ಮರಾಗ , ಸ್ವರ್ಣ  ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.

ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.

೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…