ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.
ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…