inspirational

ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

25

ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ.

  • ಮಯೂನ್.ಎನ್
  • Published On – 25 May 2021
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ ಆಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆಯ ಆರ್ಭಟ ಬಂದು ಅಪ್ಪಳಿಸಿದೆ. ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನ ನೊಂದು ಬೆಂದಿದ್ದಾರೆ. ಆದರೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂಬ ಸೂಚನೆಗಳಿವೆ. ಹೀಗಾಗಿ ಸರ್ಕಾರ ಮೂರನೆ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆಯಂತೆ.

ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮೂರನೇ ಅಲೆ ಎದುರಿಸುವುದಕ್ಕೆ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಸರ್ಕಾರ ಚರ್ಚೆ ನಡೆಸುತ್ತಿದೆ.

ದೊಡ್ಡ ದೊಡ್ಡ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿ ಆಕ್ಸಿಜನ್ ಉತ್ಪಾದನೆಯ ಜೊತೆಗೆ ಬಳಕೆ ಮಾಡಲಾಗುತ್ತದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಕ್ಸಿಜನ್ ಸಮಸ್ಯೆಯಾಗಬಹುದು. ಹೀಗಾಗಿ ಆಕ್ಸಿಜನ್ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಸರ್ಕಾರ ಆಸ್ಪತ್ರೆಗಳ ಹುಡುಕಾಟ ನಡೆಸುತ್ತಿದೆ. ಸದ್ಯ ಜನರಲ್ ಬೆಡ್ಗಳ ಅವಶ್ಯಕತೆ ಇಲ್ಲದಿರುವ ಕಾರಣ, ಜನರಲ್ ಬೆಡ್ಗಳನ್ನು ಐಸಿಯು ಬೆಡ್​ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. 3ನೇ ಅಲೆ ಆರಂಭವಾಗುವ ಮೊದಲೇ ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯುವ ಬಗ್ಗೆ ಯೋಚಿಸಿದ್ದು, ವಾರ್ಡ್ ಮಟ್ಟದಲ್ಲೂ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಪ್ಲ್ಯಾನ್ ಮಾಡುತ್ತಿದೆ. ಜೊತೆಗೆ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರನೇ ಅಲೆಯಿಂದ ಮಕ್ಕಳನ್ನು ತಪ್ಪಿಸಲು 8-12 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಕೇಂದ್ರದ ಆದೇಶಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…