ಉಪಯುಕ್ತ ಮಾಹಿತಿ

ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

950

ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.

ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ:- 

ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ನಲ್ಲಿಕಾಯಿ ಜ್ಯೂಸ್ ತಯಾರಿಸುವ ವಿಧಾನ:-

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ. * ಬ್ಲೆಂಡರ್‌ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿ ಅರೆಯಿರಿ.

* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರು ಸಂಗ್ರಹಿಸಿ.

*ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.

*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.

*ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.

* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…