corona

ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

36

ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ.
ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ, ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್‌ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿದ್ದು ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ.


ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ.
ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಇತರೇ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸುವುದು. ಹೆಚ್ಚಿನ ಜನರು ಗುಂಪು ಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು.
ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಮೇಲೆ ತಿಳಿಸಿರುವ ಸಲಹೆಗಳನ್ನು ಪಾಲಿಸಲು ಸಾರ್ವಜನಿಕರು ಹಾಗೂ ಸಭೆ/ಸಮಾರಂಭಗಳ ಆಯೋಜಕರಿಗೆ ಈ ಮಾಹಿತಿಯನ್ನು ನಿಖರವಾಗಿ ಪ್ರಚುರಪಡಿಸುವುದು ಹಾಗೂ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲೆಯ ಆರೋಗ್ಯ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ