ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

522

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…