ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

583

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…