News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

593

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.