ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

340

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.